BengaluruPolitics

ಮಾಜಿ ಸಿಎಂ ಯಡಿಯೂರಪ್ಪಗೆ ಝೆಡ್‌ ಶ್ರೇಣಿ ಭದ್ರತೆ ನೀಡಿದ ಕೇಂದ್ರ

ಬೆಂಗಳೂರು; ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಇಲಾಖೆ ಝೆಡ್‌ ಶ್ರೇಣಿ ಭದ್ರತೆ ಒದಗಿಸಿದೆ, ಮೂಲಗಳ ಪ್ರಕಾರ ಯಡಿಯೂರಪ್ಪ ಅವರಿಗೆ ದುಷ್ಕರ್ಮಿಗಳಿಂದ ಪ್ರಾಣ ಬೆದರಿಕೆ ಇದೆ ಅನ್ನೋ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಯಡಿಯೂರಪ್ಪ ಅವರಿಗೆ ಝೆಡ್‌ ಶ್ರೇಣಿ ಭದ್ರತೆ ನೀಡಲಾಗಿದೆ.

ಈ ಹಿಂದೆ ರಾಜ್ಯ ಸರ್ಕಾರ ಯಡಿಯೂರಪ್ಪ ಅವರಿಗೆ ಭದ್ರತೆ ನೀಡಿತ್ತು. ಆದ್ರೆ ಅದನ್ನು ವಾಪಸ್‌ ಪಡೆಯಲಾಗಿತ್ತು. ಕೇಂದ್ರ ಗೃಹ ಇಲಾಖೆಯ ನಿರ್ದೇಶನದಂತೆ ಕೇಂದ್ರ ಮೀಸಲು ಪೊಲೀಸ್ ಪಡೆ ಕಮಾಂಡೋಗಳು ಶೀಘ್ರವೇ ಭದ್ರತಾ ಉಸ್ತುವಾರಿ ವಹಿಸಿಕೊಳ್ಳಲಿದ್ದು, ಯಡಿಯೂರಪ್ಪ ಅವರ ಭದ್ರತೆಗೆ ಒಟ್ಟು 33 ಝಡ್ ಕೆಟಗರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

 

Share Post