Bengaluru

ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ಸರಗಳ್ಳತನ

ಬೆಂಗಳೂರು : ಗೋವಿಂದರಾಜನಗರದ ಪಿಎಫ್ ಲೇಔಟ್‍ನಲ್ಲಿ ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸೌಜನ್ಯ ಎಂಬವರ ಸುಮಾರು 45 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಎಸ್ಕೇಪ್‌ ಆಗಿದ್ದಾರೆ. ವಿಳಾಸ ಕೇಳುವ ನೆಪದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಸರ ಕಸಿದು ಪರಾರಿಯಾಗಿದ್ದಾರೆ

ಕಳೆದವಾರವಷ್ಟೇ ಉದ್ಘಾಟನೆ ಆಗಿದ್ದ ಗೋವಿಂದರಾಜನಗರ ಠಾಣೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ.

Share Post