Bengaluru

ಚಾಮರಾಜಪೇಟೆ ಆಟದ ಮೈದಾನ ವಿವಾದ; ಬಂದ್‌ ಹಿನ್ನೆಲೆ ಬಿಗಿ ಬಂದೋಬಸ್ತ್‌

ಬೆಂಗಳೂರು;  ಚಾಮರಾಜಪೇಟೆ ಆಟದ ಮೈದಾನ ವಿವಾದ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಚಾಮರಾಜಪೇಟೆ ಬಂದ್​ಗೆ ಕರೆ ನೀಡಿವೆ.  ಬೆಳಗ್ಗೆ 8 ಗಂಟೆಯಿಂದಲೇ ಅಂಗಡ ಮುಂಗಟ್ಟುಗಳು ಬಂದ್‌ ಆಗಿವೆ. ಹಾಲು, ತರಕಾರಿ, ಮೆಡಿಕಲ್ ಬಿಟ್ಟು ಉಳಿದೆಲ್ಲ ಅಂಗಡಿಗಳು ಮುಚ್ಚಿವೆ. ಸಂಜೆ 5 ಗಂಟೆಯವರೆಗೂ ಸಂಪೂರ್ಣ ಬಂದ್ ಇರಲಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸ್ಥಳದಲ್ಲಿ 457 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉನ್ನತಾಧಿಕಾರಿಗಳು ಭದ್ರತೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಇನ್ನು ಚಾಮರಾಜಪೇಟೆ ಮತ್ತು ಸುತ್ತಮುತ್ತಲಿನ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಶಾಲಾ ಕಾಲೇಜುಗಳಿಗೆ ಇನ್ನೂ ರಜೆ ಘೋಷಣೆ ಮಾಡಿಲ್ಲ. ಪರಿಸ್ಥಿತಿ ಅವಲೋಕಿಸಿಕೊಂಡು ನಿರ್ಧರಿಸುವ ಸಾಧ್ಯತೆಯಿದೆ ಎಂದು ಶಿಕ್ಷಕರೊಬ್ಬರು ತಿಳಿಸಿದರು.

Share Post