Bengaluru

ಗಾಯಗೊಂಡ ಆನೆ, ಮರಿಗೆ ಬಗ್ಗೆ ರಾಹುಲ್‌ ಮಾಹಿತಿ; ಸೂಕ್ತ ಚಿಕಿತ್ಸೆ ಕೊಡಿಸ್ತೀವೆಂದ ಸಿಎಂ

ಬೆಂಗಳೂರು; ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ನಾಗರಹೊಳೆ ಅಭಯಾರಣ್ಯದಲ್ಲಿ ಗಾಯಗೊಂಡ ಆನೆ ಹಾಗೂ ಆನೆ ಮರಿ ನೋಡಿದ್ದು, ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅವರು ಸರ್ಕಾರದ ಗಮನ ಸೆಳೆದಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ರಾಹುಲ್ ಗಾಂಧಿ ನನಗೆ ಒಂದು ಪತ್ರ ಬರೆದಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಆನೆ ಮತ್ತು ಮರಿ ನೋಡಿದ್ದರಂತೆ. ಎರಡೂ ಗಾಯಗೊಂಡಿರುವ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ಭಾರತ್ ಜೋಡೋ ಯಾತ್ರೆಗೆ ಪರ್ಯಾಯವಾಗಿ ಬಿಜೆಪಿಯಿಂದ ಯಾತ್ರೆಗೆ ಸಿದ್ಧತೆ ನಡೆಯುತ್ತಿದೆ ಎಂದು ವಿಚಾರದ ಬಗ್ಗೆ ಸಿಎಂ ಮಾತನಾಡಿದರು. ಯಾತ್ರೆ ಮಾಡಲು ಮೊದಲು ನಾವೇ ಸಿದ್ಧತೆ ಮಾಡಿಕೊಂಡಿದ್ದೆವು. ಬಿ.ಎಸ್​.ಯಡಿಯೂರಪ್ಪ ಮತ್ತು ನನ್ನ ನೇತೃತ್ವದಲ್ಲಿ ಯಾತ್ರೆ ಶುರುವಾಗಬೇಕಿತ್ತು. ಆದರೆ ದಸರಾ ಕಾರ್ಯಕ್ರಮ ಬಂದಿದ್ರಿಂದ ತಾತ್ಕಾಲಿಕವಾಗಿ ನಿಂತಿದೆ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದರು.

Share Post