Bengaluru

ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ನವೀನ್‌ ಮೃತದೇಹ ಸಿಕ್ಕಿದೆ; ಸಿಎಂ ಬಸರಾಜ ಬೊಮ್ಮಾಯಿ

ಬೆಂಗಳೂರು: ಉಕ್ರೇನ್‌ನ ಖಾರ್ಕೀವ್‌ನಲ್ಲಿ ರಷ್ಯಾದ ಶೆಲ್‌ ದಾಳಿಗೆ ಬಲಿಯಾಗಿದ್ದ ಕನ್ನಡಿಗ ನವೀನ್‌ ಮೃತದೇಹ ಪತ್ತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಾತ್ರಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ನವೀನ್ ಮೃತದೇಹ ಸಿಕ್ಕಿದೆ. ಉಕ್ರೇನಿನ‌ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಮೃತದೇಹವನ್ನು ಭಾರತಕ್ಕೆ ತರಲು ಕೇಂದ್ರ ಸಚಿವ ಜೈಶಂಕರ್ ಅವರ ಜೊತೆ ಮಾತಾಡಿದ್ದೇನೆ ಎಂದು ಹೇಳಿದ್ದಾರೆ.

ಉಕ್ರೇನ್‌ನಲ್ಲಿ ಇನ್ನೂ ಯುದ್ಧ ನಡೆಯುತ್ತಿದೆ. ಹೀಗಾಗಿ ನವೀನ್‌ ಮೃತದೇಹವನ್ನು ತರುವುದಕ್ಕೆ ಕಷ್ಟವಾಗುತ್ತಿದೆ. ಆದ್ರೆ, ನವೀನ್‌ ಮೃತದೇಹ ತರುವುದಕ್ಕೆ ಪ್ರಯತ್ನಗಳು ಮುಂದುವರೆದಿವೆ. ಉಕ್ರೇನ್‌ ಹಾಗೂ ರಷ್ಯಾ ಎರಡೂ ಕಡೆಯವರ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Share Post