Bengaluru

ವಾರ್ಡ್‌ ಮರುವಿಂಗಡಣೆ; ವಿಪಕ್ಷ ನಾಯಕರ ಆರೋಪ ರಾಜಕೀಯ ಪ್ರೇರಿತ – ಸಿಎಂ ಬೊಮ್ಮಾಯಿ

ಬೆಂಗಳೂರು; ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಕುರಿತು ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಹೇಳಿಕೆ ರಾಜಕೀಯ ಪ್ರೇರಿತ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,  ಆಕ್ಷೇಪಣೆ ಸಲ್ಲಿಸಲು 15 ದಿನಗಳ ಅವಕಾಶ ನೀಡಿದ್ದೇವೆ. ಆಕ್ಷೇಪಣೆಗಳನ್ನು ನೋಡಿಕೊಂಡು ಏನು ಸರಿಪಡಿಸಬೇಕೋ ಅದನ್ನು ಮಾಡ್ತೇವೆ ಎಂದು ಹೇಳಿದ್ದರು.

  ವಿಪಕ್ಷದವರು ಕೇವಲ ರಾಜಕೀಯ ಆರೋಪಗಳು ಮಾಡುತ್ತಿದ್ದಾರೆ ಅಷ್ಟೇ ಎಂದು ಸಿಎಂ ಬೊಮ್ಮಾಯಿ, ಏನಾದರೂ ಆಕ್ಷೇಪಣೆಗಳಿದ್ದರೆ ಸಾರ್ವಜನಿಕರು ಸಲ್ಲಿಸಲಿ. ಸಾರ್ವಕರ ಆಕ್ಷೇಪಣೆಗಳನ್ನು ಆಧರಿಸಿ ಏನಾದರೂ ಸರಿಪಡಿಸುವುದಿದ್ದರೆ ಮಾಡುತ್ತೇವೆ ಎಂದು ಹೇಳಿದರು.

Share Post