Bengaluru

ಸಿದ್ದರಾಮಯ್ಯ ಆರ್ಯರೋ, ದ್ರಾವಿಡರೋ ಹೇಳಲಿ; ಸಿಎಂ ಬೊಮ್ಮಾಯಿ

ಬೆಂಗಳೂರು; ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರ್ಯರಾ? ಅಥವಾ ದ್ರಾವಿಡರಾ? ಅನ್ನೋದನ್ನು ಮೊದಲು ಹೇಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲೆಸೆದಿದ್ದಾರೆ.  ಬೆಂಗಳೂರಿನ ಆರ್.ಟಿ. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಸಿಎಂ, ಆರ್​ಎಸ್​ಎಸ್ ಮೂಲದ ಬಗ್ಗೆ ಪ್ರಶ್ನಿಸಿದ್ದ ಸಿದ್ದರಾಮಯ್ಯರ ಹೇಳಿಕೆಗೆ ತಿರುಗೇಟು ನೀಡಿದರು.

ಮೊದಲು ಸಿದ್ದರಾಮಯ್ಯ ಎಲ್ಲಿಂದ ಬಂದಿದ್ದಾರೋ ಹೇಳಲಿ. ಸಿದ್ದರಾಮಯ್ಯ ಆರ್ಯರಾ? ದ್ರಾವಿಡರಾ? ಎಂದು ಸಿಎಂ ಪ್ರಶ್ನೆ ಮಾಡಿದರು. ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯಿಂದ ರೋಹಿತ್ ಚಕ್ರತೀರ್ಥರನ್ನು ಕೈಬಿಡಬೇಕೆಂಬ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಈ ವಿಚಾರಗಳ ಬಗ್ಗೆ ಶಿಕ್ಷಣ ಸಚಿವರಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಏನೇನಾಗಿದೆ ಅಂತ‌ ನೋಡಿಕೊಂಡು ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

 

ಮತ್ತೆ ಹಿಜಾಬ್‌ ವಿಚಾರ ಮುನ್ನೆಲೆಗೆ ಬಂದಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಹಿಜಾಬ್ ವಿವಾದ ಮಾಡುವ ಅಗತ್ಯ ಇಲ್ಲ. ಈಗಾಗಲೇ ಕೋರ್ಟ್ ತನ್ನ ಆದೇಶ ಕೊಟ್ಟಿದೆ. ಎಲ್ಲರೂ ಕೋರ್ಟ್ ಆದೇಶ ಪಾಲಿಸಬೇಕು. ಶೇ.99.99ರಷ್ಟು ಮಂದಿ ಕೋರ್ಟ್ ಆದೇಶ ಪಾಲಿಸಿದ್ದಾರೆ ಎಂದರು.

 

Share Post