BengaluruCrime

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ಪರಿಹಾರ-ಸಿಎಂ

ಬೆಂಗಳೂರು; ತುಮಕೂರು ಜಿಲ್ಲೆ ಕಳ್ಳಂಬೆಳ್ಳದಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಸ್ತೆ ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ರಾಯಚೂರು ಮೂಲದ ಬಡ ಕೂಲಿ ಕಾರ್ಮಿಕರಾಗಿದ್ದಾರೆ. ಘಟನೆ ನನಗೆ ತೀವ್ರ ದುಃಖ ತಂದಿದೆ. ಈಗಾಗಲೇ ಪ್ರಧಾನ ಮಂತ್ರಿಗಳು ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಚಿಕಿತ್ಸೆಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ರಾಜ್ಯ ಸರ್ಕಾರ ವತಿಯಿಂದ 5 ಲಕ್ಷ ರೂಪಾಯಿ ಕೊಡಲು ನಿರ್ಧರಿಸಿದ್ದು ಈ ಬಗ್ಗೆ ತುಮಕೂರು ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ ಎಂದರು.

Share Post