Bengaluru

ಸಿಎಂ ಬೊಮ್ಮಾಯಿ ನಾಳೆ ದೆಹಲಿ ಭೇಟಿ; ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಾ..?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಾಳೆಯಿಂದ ಎರಡು ದಿನ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.  ಬೊಮ್ಮಾಯಿಯವರ ಜೊತೆ ಸಚಿವ ಗೋವಿಂದ ಕಾರಜೋಳ ಕೂಡಾ ದೆಹಲಿಗೆ ತೆರಳಲಿದ್ದಾರೆ.

ಮೊದಲಿಗೆ ಸಿಎಂ ಬೊಮ್ಮಾಯಿಯವರು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸೀಂಗ್‌ ಶೆಖಾವತ್‌ ಅವರನ್ನು ಭೇಟಿಯಾಗಲಿದ್ದಾರೆ. ಅನಂತರ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇದರ ಜೊತೆಗೆ ಸಿಎಂ ಬೊಮ್ಮಾಯಿಯವರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನೂ ಭೇಟಿಯಾಗುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಹಲವು ದಿನಗಳಿಂದ ಸಂಪುಟ ವಿಸ್ತರಣೆ ಅಥವಾ ಪುನಾರಚಣೆಗೆ ಒತ್ತಡಗಳು ಕೇಳಿಬರುತ್ತಿವೆ. ಈ ಬೆನ್ನಲ್ಲೇ ಸಿಎಂ ಹೈಕಮಾಂಡ್‌ ಭೆಟಿಯಾಗುತ್ತಿದ್ದಾರೆ. ಹೀಗಾಗಿ ಆಕಾಂಕ್ಷಿಗಳಲ್ಲಿ ಆಸೆ ಚಿಗುರೊಡೆದಿದೆ.

Share Post