BengaluruDistricts

ಯೋಧರ ಪ್ರಶಸ್ತಿ ಮೊತ್ತ ಹೆಚ್ಚಳ

ಬೆಳಗಾವಿ: ಯೋಧರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ನಗದು ಅನುದಾನದ ಮೊತ್ತದ ಬಗ್ಗೆ ಪರಿಷ್ಕರಣೆ ನಡೆಸಿದ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ. ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ ಹೆಚ್ಚಳ ಮಾಡಲಾಗಿದೆ. ಮಹಾವೀರ ಚಕ್ರ 12 ಲಕ್ಷದಿಂದ 1 ಕೋಟಿ‌ ರೂಪಾಯಿ, ಅಶೋಕ ಚಕ್ರ 25 ಲಕ್ಷದಿಂದ 1.5 ಕೋಟಿ ರೂಪಾಯಿ, ಕೀರ್ತಿ ಚಕ್ರ 12 ಲಕ್ಷದಿಂದ 1 ಕೋಟಿ ರೂಪಾಯಿ, ವೀರ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ, ಶೌರ್ಯ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ, ಸೇನಾ ಮೆಡಲ್‌ 2 ಲಕ್ಷದಿಂದ 15 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಸಿಎಂ ಆದೇಶಿದ್ದಾರೆ.
ಇನ್ನು ಇದೇ ವೇಳೆ ಇತ್ತೀಚೆಗೆ ಹೆಲಿಕಾಪ್ಟರ್ ದುರುಂತದಲ್ಲಿ ಸಾವನ್ನಪ್ಪಿದ ಬಿಪಿನ್ ರಾವತ್ ಹಾಗೂ 13 ಜನರ ಸಾವಿಗೆ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದರು. ಅಲ್ಲದೇ ಬಿಪಿನ್ ರಾವತ್ ಕಾರ್ಯವನ್ನ ಶ್ಲಾಘಿಸಿದರು.

Share Post