BengaluruPolitics

ಚುನಾವಣೆ ಹೊಸ್ತಿಲಲ್ಲಿ 4 ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು; ರಾಜ್ಯ ವಿಧಾನಸಭಾ ಚುನಾವಣೆ ಇನ್ನೇನು ಘೋಷಣೆಯಾಗಲಿದೆ. ಈಗಾಗಲೇ ಎಲ್ಲಾ ಪಕ್ಷಗಳೂ ಪ್ರಚಾರದ ಭರಾಟೆ ಶುರು ಮಾಡಿವೆ. ಈ ನಡುವೆ ರಾಜ್ಯ ಬಿಜೆಪಿ ಸರ್ಕಾರ ಹಲವು ಯೋಜನೆಗಳನ್ನು ಜಾರಿ ಮಾಡುವ ಮೂಲಕ ಮತದಾರರನ್ನು ಒಲಿಸಿಕೊಳ್ಳುವ ಪ್ರಯತ್ನ ಮಾಡ್ತಿದೆ. ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿಯವರು ನಾಲ್ಕು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಬಜೆಟ್‌ನಲ್ಲಿ ಘೋಷಣೆಯಂತೆ ಸಿಎಂ ಬೊಮ್ಮಾಯಿ ಇಂದು ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಹಾಗೂ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಗಳಿಗೆ ಇಂದು ಚಾಲನೆ ದೊರೆತಿದೆ.

Share Post