Bengaluru

ಬಜೆಟ್‌ನಲ್ಲಿ ದೇಶದ ಆರ್ಥಿಕ ಚೇತರಿಕೆಗೆ ಅಗತ್ಯ ಕ್ರಮ; ಸಿಎಂ ಬೊಮ್ಮಾಯಿ ವಿಶ್ವಾಸ

ಬೆಂಗಳೂರು: ನಮ್ಮ ದೇಶದ ಆರ್ಥಿಕತೆ ಚೇತರಿಕೆಯಾಗುತ್ತಿದೆ. ಇದಕ್ಕೆ ಪೂರಕವಾದ ನಿರ್ಧಾರಗಳನ್ನು ಬಜೆಟ್‌ನಲ್ಲಿ ತೆಗೆದುಕೊಂಡಿರುತ್ತಾರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದೇಶದ ಆರ್ಥಿಕತೆ ಚೇತರಿಕೆಗೆ ಬೇಕಾದ ಎಲ್ಲಾ ಕ್ರಮಗಳನ್ನೂ ಕೈಗೊಂಡಿದೆ. ಅದಕ್ಕೆ ಪೂರಕವಾಗಿ ಅನುಕೂಲವಾಗುವಂತೆ ಕೇಂದ್ರ ಬಜೆಟ್‌ ಮಂಡನೆಯಾಗುವ ಎಲ್ಲಾ ವಿಶ್ವಾಸವಿದೆ ಎಂದು ಹೇಳಿದರು.

ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಅಭಿವೃದ್ಧಿ ಹಾಗೂ ರೈಲ್ವೆ ಯೋಜನೆಗಳಿಗೆ ಹಣ ಮೀಸಲಿಡುವ ವಿಶ್ವಾಸವಿದೆ. ಜೊತೆಗೆ ಉದ್ಯಮಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಸಾಧ್ಯತೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಇನ್ನು ಇಂದು ಕೇವಲ ಬಜೆಟ್‌ ಮಂಡನೆಯಷ್ಟೇ ಮಾಡಲಾಗುತ್ತದೆ. ಆದ್ರೆ ಪೂರ್ಣ ಪ್ರಮಾಣದ ಮಾಹಿತಿ ತಿಳಿಯಲು ಎರಡು ದಿನ ಬೇಕಾಗಬಹುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

Share Post