Bengaluru

ರಾಜ್ಯ ಬಜೆಟ್‌ ಹಿನ್ನೆಲೆ; ಶ್ರೀಕಂಠೇಶ್ವರನಿಗೆ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು; ಚೊಚ್ಚಲ ಬಜೆಟ್‌ ಮಂಡಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ಬೆಳಗ್ಗೆ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಆಂಜನೇಯನ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸಮಸ್ತ ಕರ್ನಾಟಕದ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ರಾಜ್ಯದ ಜನತೆಗೆ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

Share Post