Bengaluru

ಮಕ್ಕಳ ಲಸಿಕೆ ಅಭಿಯಾನಕ್ಕೆ ಮೋದಿಗೆ ಸಿಎಂ ಬೊಮ್ಮಾಯಿ ಧನ್ಯವಾದ

ಬೆಂಗಳೂರು: 15 ರಿಂದ 18 ವಯಸ್ಸಿನ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಿದ್ದಕ್ಕೆ ಪ್ರಧಾನಿ ಮೋದಿಗೆ ಸಿಎಂ ಬಸವರಾಜ್‌ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ. ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವುದಾಗಿ ಘೋಷಿಸಿದ್ರು. ಮೋದಿಯವರ ಈ ನಿರ್ಣಯಕ್ಕೆ ಸಿಎಂ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಮೋದಿಜಿಯವರ ಕೋವಿಡ್‌ ವಿರುದ್ಧದ ಹೋರಾಟವನ್ನು ನಾಣು ಸ್ವಾಗತಿಸುತ್ತೇನೆ. ಅವರ ದೂರದೃಷ್ಟಿ, ಪ್ರಯತ್ನ ಹಾಗೂ ನಿರ್ಣಯಗಳು ಕೋವಿಡ್‌ ವಿರುದ್ಧದ ಹೋರಾಟವನ್ನು ಯಶಸ್ವಿಗೊಳಿಸುತ್ತದೆ ಎಂಬ ಸಂಪೂರ್ಣವಾದ ನಂಬಿಕೆಯಿದೆ.

ಪ್ರಧಾನಿಯವರ ನಿರ್ಣಯ ಹಾಗೂ ಸಲಹೆಯನ್ನು ದೇಶ ಮತ್ತು ರಾಜ್ಯದ ಜನತೆ ಗಂಭೀರವಾಗಿ ಪರಿಗಣಿಸಿ ಅದನ್ನು ಕಾರ್ಯರೂಪಕ್ಕೆ ತಂದಿದ್ದೇ ಆದ್ರೆ ಮಕ್ಕಳು. ಆರೋಗ್ಯ ಸೇವಾ ಕಾರ್ಯಕರ್ತರು, ವಯೋವೃದ್ಧರಿಗೆ ಬರುವಂತಹ ಕೋವಿಡ್‌ ಮಹಾಮಾರಿಯಿಂದ ಸಂಪೂರ್ಣವಾಗಿ ರಕ್ಷಿಸಲು ಸಾಧ್ಯವಾಗುತ್ತದೆ. ಈ ನಿರ್ಧಾರ ಮಾಡಿರುವ ಪ್ರಧಾನಿ ಮೋದಿಯವರಿಗೆ ಅನಂತ ಅನಂತ ಧನ್ಯವಾದಗಳೆಂದು ಟ್ವೀಟ್‌ ಮಾಡಿದ್ದಾರೆ.

Share Post