Bengaluru

ಸಿಂಗಟಾಲೂರು ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಗಡುವು

ಬೆಂಗಳೂರು: ಸಿಂಗಟಾಲೂರು ಏತ ನೀರಾವರಿ ಯೋಜನೆಯ ಪ್ಯಾಕೇಜ್ 6 ರ ಟೆಂಡರ್ ನ್ನು ಮಾರ್ಚ್ 31ರೊಳಗೆ ಕರೆದು ಯೋಜನೆಯನ್ನು ಡಿಸೆಂಬರ್ ತಿಂಗಳೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ರು.

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ, ಏತ ನೀರಾವರಿ ಯೋಜನೆಯ ಪ್ಯಾಕೇಜ್ 6 ನ್ನು ಮರು ಅಂದಾಜು ಮಾಡಿ, ಮಧ್ಯಪ್ರದೇಶ ಮಾದರಿಯಲ್ಲಿ ಕಾಮಗಾರಿಯನ್ನು ಕೈಗೊಂಡು ರೈತರಿಗೆ ಅನುಕೂಲವಾಗಲು ನೇರವಾಗಿ ರೈತರ ಹೊಲದಲ್ಲಿಯೇ ಔಟ್‍ಲೆಟ್ ನೀಡುವಂತೆ ಸೂಚಿಸಿದರು. ಕೊಪ್ಪಳ ಬ್ರಾಂಚ್ ಕಾಲುವೆ ಅಡಿಯಲ್ಲಿ ಬರುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಸೂಚಿಸಿದರು.

ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್, ಶಾಸಕ ರಾಘವೇಂದ್ರ ಹಿಟ್ನಾಳ್ ಪಾಲ್ಗೊಂಡಿದ್ದರು.

Share Post