Bengaluru

CM IBRAHIM; ಬೊಮ್ಮಾಯಿ ಭೇಟಿಯಾದ ಸಿಎಂ ಇಬ್ರಾಹಿಂ

ಬೆಂಗಳೂರು: ಕಾಂಗ್ರೆಸ್‌ ತೊರೆಯಲು ತುದಿಗಾಲಲ್ಲಿ ನಿಂತಿರುವ ವಿಧಾನ ಪರಿಷತ್‌ ಸದಸ್ಯ ಸಿ.ಎಂ.ಇಬ್ರಾಹಿಂ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ವಿಧಾನಸೌಧದ ಸಿಎಂ ಕಚೇರಿಗೆ ಭೇಟಿ ನೀಡಿರುವ ಇಬ್ರಾಹಿಂ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಮಾಲೋಚನೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಸಿಎಂ ಇಬ್ರಾಹಿಂ ಅವರು, ನಿಮ್ಮ ಜೊತೆ ಮಾತನಾಡಬೇಕು ಎಂದು ಸಿಎಂ ಬೊಮ್ಮಾಯಿಯವರಿಗೆ ಕೇಳಿದ್ದರು. ಕಚೇರಿಗೆ ಬಂದು ಮಾತನಾಡುವಂತೆ ಇಬ್ರಾಹಿಂ ಸಿಎಂ ಬೊಮ್ಮಾಯಿ ಸೂಚಿಸಿದ್ದರು. ಇದೀಗ ಇಬ್ರಾಹಿಂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ.

ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್‌ ಬಿಟ್ಟು ಜೆಡಿಎಸ್‌ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಕರೆ ಬಂದಿದ್ದರಿಂದಾಗಿ ತಮ್ಮ ನಿರ್ಧಾರವನ್ನು ಕೆಲಕಾಲ ಮುಂದೂಡಿದ್ದಾರೆ. ಈ ಬೆನ್ನಲ್ಲೇ ಮುಖ್ಯಮಂತ್ರಿಯನ್ನು ಇಬ್ರಾಹಿ ಭೇಟಿ ಮಾಡಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.

 

Share Post