Bengaluru

ಪರಿಷತ್‌ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ

ಬೆಂಗಳೂರು: ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ಅವರು ರಾಜೀನಾಮೆ ನೀಡಿದ್ದಾರೆ. ವಿಧಾನಪರಿಷತ್‌ ಅಧ್ಯಕ್ಷರಿಗೆ ಇಂದು ಸಿ.ಎಂ.ಇಬ್ರಾಹಿಂ ಅವರು ರಾಜೀನಾಮೆ ಪತ್ರ ತಲುಪಿಸಿದ್ದಾರೆ. ಪರಿಷತ್‌ ಕಾಂಗ್ರೆಸ್‌ ನಾಯಕನ ಸ್ಥಾನ ನೀಡದಿದ್ದಕ್ಕೆ ಆಕ್ರೋಶಗೊಂಡಿದ್ದ ಸಿ.ಎಂ.ಇಬ್ರಾಹಿಂ ಅವರು, ಪಕ್ಷ ತೊರೆ ನಿರ್ಧಾರ ಪ್ರಕಟಿಸಿದ್ದರು. ಪಕ್ಷ ತೊರೆಯುತ್ತಿರುವುದರಿಂದಾಗಿ ಕಾಂಗ್ರೆಸ್‌ ಪಕ್ಷದಿಂದ ಆಯ್ಕೆಯಾಗಿದ್ದ ವಿಧಾನ ಪರಿಷತ್‌ ಸ್ಥಾನವನ್ನೂ ಅವರು ತೊರೆದಿದ್ದಾರೆ.

ಸಿ.ಎಂ.ಇಬ್ರಾಹಿಂ ಅವರನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಪ್ರಯತ್ನ  ಮಾಡಿದ್ದರು. ಆದ್ರೆ ಇಬ್ರಾಹಿಂ ಅವರು ತಮ್ಮ ನಿಲುವನ್ನು ಬದಲಿಸಿಲ್ಲ. ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿ, ಸೋನಿಯಾಗಾಂಧಿಗೆ ರಾಜೀನಾಮೆ ಪತ್ರ ಕಳುಹಿಸಿಕೊಟ್ಟಿದ್ದರು. ಇದೀಗ ಪರಿಷತ್‌ ಸ್ಥಾನಕ್ಕೂ ಅವರು ರಾಜೀನಾಮೆ ನೀಡಿದ್ದಾರೆ. ಇಬ್ರಾಹಿಂ ಅವರು ಜೆಡಿಎಸ್‌ ಪಕ್ಷಕ್ಕೆ ಸೇರಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಅವರು ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಜೊತೆ ಈ ಬಗ್ಗೆ ಮಾತುಕತೆಯನ್ನೂ ನಡೆಸಿದ್ದಾರೆ.

Share Post