Bengaluru

ಹೈಕೋರ್ಟ್‌ ಆದೇಶ ಹಿನ್ನೆಲೆ; ಶಾಲೆ ವಿಚಾರವಾಗಿ ಸಭೆ ಕರೆದ ಸಿಎಂ

ಬೆಂಗಳೂರು: ಆದಷ್ಟು ಬೇಗ ಶಾಲೆ ಆರಂಭ ಮಾಡುವಂತೆ ಹೈಕೋರ್ಟ್‌ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಂಜೆ ಆರು ಗಂಟೆಗೆ ತುರ್ತು ಸಭೆ ಕರೆದಿದ್ದಾರೆ. ರೇಸ್‌ ಕೋರ್ಟ್‌ ರಸ್ತೆಯ ಶಕ್ತಿ ಭವನದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಭಾಗವಹಿಸಲಿದ್ದಾರೆ.

ಹಿಜಾಬ್‌ ವಿಚಾರವಾಗಿ ರಾಜ್ಯದ ಹಲವೆಡೆ ಗಲಾಟೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಮೂರು ದಿನ ಶಾಲೆಗಳಿಗೆ ರಜೆ ನೀಡಲಾಗಿತ್ತು. ಇದೀಗ ಕೋರ್ಟ್‌ ತೀರ್ಪು ನೀಡುವವರೆಗೂ ಹಿಜಾಬ್‌ ಅಥವಾ ಕೇಸರಿ ಶಾಲುಗೆ ಅವಕಾಶ ನೀಡಬೇಡಿ. ಆದಷ್ಟು ಬೇಗ ಶಾಲೆಗಳನ್ನು ಆರಂಭಿಸಿ ಎಂದು ಸರ್ಕಾರಕ್ಕೆ ಮೌಖಿಕ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಶಾಲೆ ಆರಂಭಿಸಬೇಕೆ ಬೇಡವೇ..? ಎಂಬುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ.

 

Share Post