BengaluruHealth

ಒಮಿಕ್ರಾನ್‌ ಭೀತಿ; ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ- ಸಂಜೆ ಹೊಸ ಗೈಡ್‌ಲೈನ್ಸ್‌..?

ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್‌ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಸೋಂಕು ಹರಡದಂತೆ ತಡೆಯಲು ಕ್ರಮಗಳನ್ನು ಕೈಗೊಳ್ಳಲು ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತಜ್ಞರು ಪಾಲ್ಗೊಂಡಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರು ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ. ಅವರ ಸಂಪರ್ಕಿತರ ವಿವರ. ದಕ್ಷಿಣ ಆಫ್ರಿಕಾದಿಂದ ಬಂದ ಇತರರ ಬಗ್ಗೆ ಸಭೆಯಲ್ಲಿ ಮಾಹಿತಿ ಪಡೆಯಲಾಗುತ್ತಿದೆ. ಜೊತೆಗೆ ಸೋಂಕು ಹರಡದಂತೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬೇಕು. ಏನೆಲ್ಲಾ ರೂಲ್ಸ್‌ ಜಾರಿ ಮಾಡಬೇಕು ಎಂಬುದರ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದಾರೆ.

ಅಧಿಕಾರಿಗಳು ಜೊತೆ ಸಭೆ ನಂತರ ಕಠಿಣ ರೂಲ್ಸ್‌ ಜಾರಿ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಸಂಜೆಯೊಳಗೆ ಹೊಸ ರೂಲ್ಸ್‌ ಜಾರಿ ಮಾಡುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.

 

 

Share Post