BengaluruPolitics

ಪ್ರತಿ ಶನಿವಾರ ಶಾಸಕರು, ಸಂಸದರ ಭೇಟಿಗೆ ಅವಕಾಶ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರು, ಸಂಸದರು, ವಿಧಾಪರಿಷತ್‌ ಸದಸ್ಯರ ಭೇಟಿಗೆ ಅವಕಾಶ ನೀಡಿದ್ದಾರೆ. ಪ್ರತಿ ಶನಿವಾರ ಶಾಸಕರು, ಸಂಸದರು, ಪರಿಷತ್‌ ಸದಸ್ಯರು ಪಕ್ಷಾತೀತವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಬಹುದಾಗಿದೆ. ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳು ಹಾಗೂ ಅನುದಾನದ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಬಹುದು.

ಇಂದಿನಿಂದ ಈ ಪ್ರಕ್ರಿಯೆ ಶುರುವಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಭೇಟಿ ಶುರುವಾಗಿದೆ. ಮಧ್ಯಾಹ್ನ 2 ಗಂಟೆಯವರೆಗೂ ಮುಖ್ಯಮಂತ್ರಿಗಳನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಬಹುದಾಗಿದೆ. ಮುಂದಿನ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲಬ್ಯತೆ ಆಧಾರದ ಮೇಲೆ ಸಮಯ ನಿಗದಿ ಮಾಡಲಾಗುತ್ತದೆ. ಆ ಸಮಯದಲ್ಲಿ ಶಾಸಕರು ಸಿಎಂ ಅವರನ್ನು ಭೇಟಿಯಾಗಬಹುದು. ಈ ವಿಚಾರವನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ ಪ್ರಕಟಣೆ ಹೊರಡಸಿದ್ದಾರೆ.

 

Share Post