BengaluruLifestyle

ಬಕ್ರೀದ್‌ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಇಂದು ಬಕ್ರೀದ್‌ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಹಾಜರಿದ್ದರು. ಮುಸ್ಲಿಂ ಬಂಧುಗಳಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.

ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವೆಲ್ಲರು ಮನುಷ್ಯರು, ಪರಸ್ಪರ ಪ್ರೀತಿಯಿಂದ ಇರಬೇಕು ಎಂದರು. ಕೆಲವು ಶಕ್ತಿಗಳು ಬೇಕು ಅಂತಾ ಅಹಿತಕರ ಚಟುವಟಿಕೆಗಳು ನಡೆಸುತ್ತವೆ. ಅದಕ್ಕೆ ನಾವು ಸೊಪ್ಪು ಹಾಕೋದಕ್ಕೆ ಹೋಗಬಾರದು. ಎಲ್ಲರೂ ಪ್ರೀತಿ ಹಾಗೂ ಸಹಬಾಳ್ವೆ ನಡೆಸಿದರೆ, ರಾಜ್ಯದ ಅಭಿವೃದ್ಧಿ ಸಾಧ್ಯ. ಪ್ರೀತಿ ವಿಶ್ವಾಸದ ಮನಸ್ಸು ಎಲ್ಲರಿಗೆ ಬರಬೇಕು. ಇಂದು ಪ್ರಾರ್ಥನೆ ಮಾಡಿ ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ಕೇಳಿಕೊಂಡಿದ್ದೇನೆ ಎಂದು ಸಿಎಂ ಹೇಳಿದರು.

Share Post