BengaluruPolitics

ಮೂರನೇ ಗ್ಯಾರೆಂಟಿ ಘೋಷಿಸಿದ ಕಾಂಗ್ರೆಸ್‌; ಹತ್ತು ಕೆಜಿ ಉಚಿತ ಅಕ್ಕಿ

ಬೆಂಗಳೂರು; ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್‌ ಪಕ್ಷ ಉಚಿತ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಂತಹ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಜನರಿಗೆ ಗ್ಯಾರೆಂಟಿ ನೀಡುತ್ತಿದೆ. ಈಗಾಗಲೇ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ಹಾಗೂ ಪ್ರತಿ ಮನೆಯ ಹೆಣ್ಣಿಗೆ ಮಾಸಿಕ 2 ಸಾವಿರ ರೂಪಾಯಿ ನೀಡೋದಾಗಿ ಕಾಂಗ್ರೆಸ್‌ ಘೋಷಣೆ ಮಾಡಿದೆ. ಇದೀಗ ಮತ್ತೊಂದು ಉಚಿತ ಯೋಜನೆಯ ಆಶ್ವಾಸನೆ ಪ್ರಕಟ ಮಾಡಿದೆ.

 

ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು, ಮೂರನೇ ಗ್ಯಾರೆಂಟಿ ಯೋಜನೆಯನ್ನು ಪ್ರಕಟಿಸಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡೋದಾಗಿ ಘೋಷಣೆ ಮಾಡಿದರು.

Share Post