BengaluruPolitics

ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ್‌ ದಿಢೀರ್‌ ಬೆಂಗಳೂರು ಭೇಟಿ; ಖರ್ಗೆ ಮನೆಯಲ್ಲಿ ಬಿಸಿ ಬಿಸಿ ಚರ್ಚೆ

ಬೆಂಗಳೂರು; ಕಾಂಗ್ರೆಸ್‌ ನಾಯಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರು ದಿಢೀರ್‌ ಅಂತ ಬೆಂಗಳೂರಿಗೆ ಭೇಟಿ ಕೊಟ್ಟಿದ್ದಾರೆ. ತಡರಾತ್ರಿ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕೆ.ಸಿ.ವೇಣುಗೋಪಾಲ್‌ ಬೆಂಗಳೂರಿಗೆ ಆಗಮಿಸಿರೋದು ಕುತೂಹಲಕ್ಕೆ ಕಾರಣವಾಗಿದೆ.

ವೇಣುಗೋಪಾಲ್‌ ಅವರು ಎಐಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ  ನಿವಾಸಕ್ಕೆ ಆಗಮಿಸಿದ್ದಾರೆ. ಅಲ್ಲಿಯೇ ಮೀಟಿಂಗ್‌ ಕೂಡಾ ನಡೆಸಲಾಗುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ನಾಯಕರ ಜೊತೆ ಕೆ.ಸಿ.ವೇಣುಗೋಪಾಲ್‌ ಗುಪ್ತ ಮಾತುಕತೆ ನಡೆಸಿದ್ದಾರೆ. ಪಂಚ ರಾಜ್ಯಗಳ ಚುನಾವಣೆಗೆ ರಾಜ್ಯದಿಂದ ಹಣ ಕಳುಹಿಸಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಈ ಬೆನ್ನಲ್ಲೇ ವೇಣುಗೋಪಾಲ್‌ ಬೆಂಗಳೂರಿಗೆ ಆಗಮಿಸಿರುವುದು ಚರ್ಚೆಗೆ ಕಾರಣವಾಗಿದೆ.

 

Share Post