BengaluruPolitics

3-4 ತಲೆಮಾರಿಗಾಗುವಷ್ಟು ಮಾಡಿಕೊಂಡಿದ್ದೇವೆ; ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ – ರಮೇಶ್‌ ಕುಮಾರ್‌

ಬೆಂಗಳೂರು; ನಾವೆಲ್ಲಾ 3-4 ತಲೆಮಾರಿಗಾಗುವಷ್ಟು ಮಾಡಿಕೊಂಡಿದ್ದೇವೆ. ಈಗ ಗಾಂಧಿ ಕುಟುಂಬದ ಋಣ ತೀರಿಸೋ ಕಾಲ ಬಂದಿದೆ. ಅವರ ಋಣ ತೀರಿಸದೇ ಹೋದರೆ ತಿನ್ನೋ ಅನ್ನಕ್ಕೆ ಹುಳ ಬೀಳುತ್ತದೆ ಎಂದು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿದ್ದಾರೆ. ಸೋನಿಯಾ ವಿಚಾರಣೆ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಈ ದೇಶ ಉಳಿಯಬೇಕು ಎಂದರೆ ಕಾಂಗ್ರೆಸ್ ಉಳಿಯಬೇಕು. ಹೀಗಾಗಿ ಎಲ್ಲಾ ಸಣ್ಣ ಪುಟ್ಟ ಮನಸ್ತಾಪಗಳನ್ನೆಲ್ಲಾ ಪಕ್ಕಕ್ಕಿಟ್ಟು ನಾವೆಲ್ಲರೂ ಒಂದಾಗಬೇಕು. ಸೋನಿಯಾ ಗಾಂಧಿಗೆ ನೈತಿಕವಾಗಿ ಬೆಂಬಲ ನೀಡಬೇಕು, ಅವರಿಗೆ ಸಮಾಧಾನ ತರಿಸಬೇಕು. ಆಗ ಮಾತ್ರ ನಾವು ತಿನ್ನುವ ಎರಡು ಹೊತ್ತಿನ ಊಟಕ್ಕೆ ಸಾರ್ಥಕತೆ ಬರುತ್ತದೆ ಎಂದು ರಮೇಶ್‌ ಕುಮಾರ್‌ ಹೇಳಿದರು.

Share Post