BengaluruPolitics

ಕಾಂಗ್ರೆಸ್‌ ಮೆರವಣಿಗೆಗೆ ಪೊಲೀಸರ ತಡೆ; ರಸ್ತೆಯಲ್ಲೇ ಕುಳಿತ ಸಿದ್ದರಾಮಯ್ಯ

ಬೆಂಗಳೂರು; ರಾಹುಲ್‌ ಗಾಂಧಿ ವಿಚಾರಣೆ ವಿರೋಧಿಸಿ ರಾಜ್ಯ ಕಾಂಗ್ರೆಸ್‌ ರಾಜಭವನ ಚಲೋ ಹಮ್ಮಿಕೊಂಡಿದ್ದು, ಕಾಂಗ್ರೆಸ್‌ ಮೆರವಣಿಗೆಯನ್ನು ಪೊಲೀಸರು ಇಂಡಿಯನ್‌ ಎಕ್ಸ್‌ಪ್ರೆಸ್‌ ಬಳಿಯೇ ತಡೆದಿದ್ದಾರೆ. ಕ್ವೀನ್ಸ್‌ ರಸ್ತೆಯ ಕಾಂಗ್ರೆಸ್‌ ಕಚೇರಿಯಿಂದ ರಾಜಭವನಕ್ಕೆ ಸಾವಿರಾರು ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ತೆರಳುತ್ತಿದ್ದರು. ಈ ವೇಳೆ ಬ್ಯಾರಿಕೇಡ್‌ ಹಾಕಿ ಇಂಡಿಯನ್‌ ಎಕ್ಸ್‌ಪ್ರೆಸ್‌ ಸರ್ಕಲ್‌ ಬಳಿಯೇ ತಡೆಯಲಾಗಿದೆ.

ಇದರಿಂದ ಆಕ್ರೋಶಗೊಂಡ ಮಾಜಿ ಸಿಎಂ ಸಿದ್ದರಾಮಯ್ಯ, ಕಾರ್ಯಕರ್ತರು ಹಾಗೂ ಶಾಸಕರ ಜೊತೆಗೂಡಿ ರಸ್ತೆ ಮಧ್ಯದಲ್ಲೇ ಧರಣಿ ಕುಳಿತಿದ್ದರು. ನಂತರ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಇನ್ನೂ ಹಲವು ನಾಯಕರನ್ನು ವಶಕ್ಕೆ ತೆಗೆದುಕೊಂಡು ಬಸ್‌ಗಳಲ್ಲಿ ತುಂಬಿಸಿಕೊಂಡು ಬೇರೆಡೆಗೆ ಸ್ಥಳಾಂತರ ಮಾಡಿದ್ದಾರೆ. ಇಂಡಿಯನ್‌ ಎಕ್ಸ್‌ಪ್ರೆಸ್‌ ಸರ್ಕಲ್‌ ನಲ್ಲಿ ಹೈಡ್ರಾಮಾ ನಡೆಯುತ್ತಿದ್ದು, ಪ್ರತಿಭಟನಾಕಾರರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 

Share Post