Bengaluru

ಕಾಂಗ್ರೆಸ್‌ ಪ್ರತಿಭಟನೆ ರಾಜಭವನ ತಲುಪುವ ಮುನ್ನವೇ ಬಂಧನ

ಬೆಂಗಳೂರು; ರಾಹುಲ್‌ ಗಾಂಧಿ ವಿಚಾರಣೆ ವಿರೋಧಿಸಿ ರಾಜ್ಯ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ರಾಜಭವನ ಚಲೋಗೆ ಪೊಲೀಸರು ಅರ್ಧದಲ್ಲೇ ತಡೆ ನೀಡಿದ್ದಾರೆ. ಇಂಡಯನ್‌ ಎಕ್ಸ್‌ಪ್ರೆಸ್‌ ಬಳಿಯೇ ಮೆರವಣಿಗೆಯನ್ನು ತಡೆದಿರುವ ಪೊಲೀಸರು, ಪ್ರತಿಭಟನೆ ನೇತೃತ್ವ ವಹಿಸಿದ್ದ ಬಹುತೇಕ ನಾಯಕರನ್ನು ವಶಕ್ಕೆ ಪಡೆದು, ಬಸ್‌ಗಳಲ್ಲಿ ಸ್ಥಳಾಂತರ ಮಾಡಿದ್ದಾರೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸೇರಿದಂತೆ ಎಲ್ಲಾ ನಾಯಕರನ್ನು ವಶಕ್ಕೆ ಪಡೆದು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಮಹಿಳಾ ನಾಯಕಿಯರನ್ನೂ ಕೂಡಾ ವಶಕ್ಕೆ ಪಡೆಯಲಾಗಿದ್ದು, ಅವರನ್ನೂ ಬಸ್‌ಗಳಲ್ಲಿ ಬೇರೆಡೆ ಸ್ಥಳಾಂತರಿಸಲಾಗಿದೆ. ಹೀಗಾಗಿ ಇಂಡಿಯನ್‌ ಎಕ್ಸ್‌ಪ್ರೆಸ್‌ ಬಳಿ ಕಾಂಗ್ರೆಸ್‌ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಿದ್ದಾರೆ.

Share Post