BengaluruPolitics

ಇಂದು ಕಾಂಗ್ರೆಸ್‌ ಮೂರನೇ ಪಟ್ಟಿ ಬಿಡುಗಡೆ; ಕೋಲಾರಕ್ಕಿಲ್ಲ ಸಿದ್ದರಾಮಯ್ಯ

ಬೆಂಗಳೂರು; ಕೊನೆಗೂ ಕಾಂಗ್ರೆಸ್‌ ಮೂರನೇ ಪಟ್ಟಿ ಬಿಡುಗಡೆಗೆ ಸಿದ್ಧವಾಗಿದೆ. ಇಂದು ಕಾಂಗ್ರೆಸ್‌ ಮೂರನೇ ಹಾಗೂ ಕೊನೆಯ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. 58 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಬಾಕಿ ಇದ್ದು, ಇಂದು ಈ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವರುಣಾ ಜೊತೆಗೆ ಕೋಲಾರದಿಂದಲೂ ಟಿಕೆಟ್‌ ನೀಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೆ ಸಿದ್ದರಾಮಯ್ಯ ಅವರನ್ನು ವರುಣಾಗೆ ಮಾತ್ರ ಸೀಮಿತ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೋಲಾರಕ್ಕೆ ಕೊತ್ತೂರು ಮಂಜುಗೆ ಟಿಕೆಟ್‌ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೊಂದೆಡೆ ಪದ್ಮನಾಭನಗರದಿಂದ ಆರ್‌.ಅಶೋಕ್‌ ವಿರುದ್ಧ ಸಂಸದ ಡಿ.ಕೆ.ಸುರೇಶ್‌ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದಿತ್ತು. ಆದ್ರೆ ಈಗಾಗಲೇ ಪದ್ಮನಾಭನಗರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಡಿ.ಕೆ.ಸುರೇಶ ರನ್ನು ಕಣಕ್ಕಿಳಿಸುವ ಚಿಂತನೆಯನ್ನೂ ಕೈಬಿಡಲಾಗಿದೆ.

ಇನ್ನು ನಿನ್ನೆಯಷ್ಟೇ ಕಾಂಗ್ರೆಸ್‌ ಸೇರಿದ್ದ ಲಕ್ಷ್ಮಣ ಸವದಿ ಅವರನ್ನು ಅಥಣಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ. ಇನ್ನು ಕೋಲಾರದಲ್ಲಿ ರಾಹುಲ್‌ ಗಾಂಧಿಯವರ ಸತ್ಯಮೇವ ಜಯತೆ ರ್ಯಾಲಿ ನಡೆಯಲಿದ್ದು, ಅದಕ್ಕಾಗಿ ಕಾಂಗ್ರೆಸ್‌ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

 

 

 

Share Post