BengaluruPolitics

ನಾಳೆಯಿಂದ ಕಾಂಗ್ರೆಸ್ ಎರಡನೇ ಹಂತದ ಬಸ್ ಯಾತ್ರೆ ಶುರು; ಉತ್ತರಕ್ಕೆ ಸಿದ್ದು, ದಕ್ಷಿಣಕ್ಕೆ ಡಿಕೆಶಿ

ಬೆಂಗಳೂರು; ನಾಳೆಯಿಂದ ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಆರಂಭವಾಗಿದೆ. ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್‌ ಪ್ರತ್ಯೇಕವಾಗಿ ಬಸ್‌ ಯಾತ್ರೆ ನಡೆಸಲಿದ್ದಾರೆ.

ಕಳೆದ ತಿಂಗಳು ಬೆಳಗಾವಿಯಿಂದ ಬಸ್‌ ಯಾತ್ರೆ ಶುರು ಮಾಡಲಾಗಿತ್ತು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಜಂಟಿಯಾಗಿ ಈ ಪ್ರಜಾಧ್ವನಿ ಯಾತ್ರೆ ಮಾಡಿದ್ದರು. ಈ ಯಾತ್ರೆ ಎಲ್ಲಾ ಜಿಲ್ಲಾ ಕೇಂದ್ರಗಳಿಗೂ ಭೇಟಿ ನೀಡಿತ್ತು. ಇದೀಗ ವಿಧಾನಸಭಾ ಕ್ಷೇತ್ರಗಳಿಗೆ ಯಾತ್ರೆ ಸಾಗಲಿದೆ. ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಬಸ್‌ ಯಾತ್ರೆ ನಡೆಯಲಿದೆ.

ನಾಳೆ ಬೀದರ್ ಜಿಲ್ಲೆಯ ಬಸವ ಕಲ್ಯಾಣದಿಂದ ಸಿದ್ದರಾಮಯ್ಯನವರು ಬಸ್‌ ಯಾತ್ರೆ ಆರಂಭಿಸಲಿದ್ದಾರೆ. ಇತ್ತ ದಕ್ಷಿಣದಲ್ಲಿ ಡಿ.ಕೆ.ಶಿವಕುಮಾರ್‌ ಯಾತ್ರೆ ಮಾಡಲಿದ್ದು, ಕೋಲಾರ ಜಿಲ್ಲೆ ಮುಳಬಾಗಿಲಿನಿಂದ ಡಿ.ಕೆ.ಶಿವಕುಮಾರ್‌ ಬಸ್‌ ಯಾತ್ರೆ ಮಾಡಲಿದ್ದಾರೆ.

 

Share Post