BengaluruPolitics

ಕಾಂಗ್ರೆಸ್‌ನವರು ನಾಯಿ-ನರಿಗಳಂತೆ ಕಚ್ಚಾಡುತ್ತಾರೆ; ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು; ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ. ಅವರು ಬೆಳಗ್ಗೆ ಎದ್ದರೆ ನಾಯಿ-ನರಿಗಳಂತೆ ಕಚ್ಚಾಟ ಮಾಡುತ್ತಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಟೀಕೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳಾದರೂ ಅದು ಮುಂದಕ್ಕೆ ಹೋಗುತ್ತಿಲ್ಲ ಎಂದರು.

ರಾಜ್ಯ ಸರ್ಕಾರದ ಚಕ್ರಗಳಲ್ಲಿ ಗಾಳಿಯೇ ಇಲ್ಲ. ಹೀಗಾಗಿ ಅದು ಮುಂದಕ್ಕೆ ಹೋಗದೆ ನಿಂತಲ್ಲೇ ನಿಂತಿದೆ. ಸಿಎಂ ಸಿದ್ದರಾಮಯ್ಯ ಅವರಿಗೇ ಸರ್ಕಾರದ ಮೇಲೆ ಹಿಡಿತ ಇಲ್ಲ. ಸಿಎಂ ಸಿದ್ದರಾಮಯ್ಯ ವಿಚಿತ್ರ ಸ್ಥಿತಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಪೂರ್ತಿಯಾಗಿ ಸ್ಥಗಿತವಾಗಿವೆ. ಕಾಂಗ್ರೆಸ್‌ ನವರು ಉಚಿತ ವಿದ್ಯುತ್‌ ಕೊಡ್ತೀವಿ ಅಂತ ಹೇಳಿ ವಿದ್ಯುತ್‌ ದರ ಏರಿಕೆ ಮಾಡಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಬರಗಾಲವಿರುವ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಆಗಲೀ, ಸಚಿವರಾಗಲೀ ಭೇಟಿ ನೀಡಿಲ್ಲ. ಶಾಸಕರಿಗೆ ಕೇವಲ 50 ಲಕ್ಷ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. ಇನ್ನು ಎಸ್‌ಸಿ, ಎಸ್‌ಟಿ ನಿಗಮಗಳಿಗೆ ಅನುದಾನವನ್ನೇ ನೀಡಿಲ್ಲ ಎಂದು ಯಡಿಯೂರಪ್ಪ ಇದೇ ವೇಳೆ ಹೇಳಿದ್ದಾರೆ.

 

Share Post