Bengaluru

ಅರ್ಜುನ ಪ್ರಾಣ ಕಳೆದುಕೊಂಡ ಸ್ಥಳದಲ್ಲಿ ಸ್ಮಾರಕ ನಿರ್ಮಾಣ; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಕಾಡಾನೆ ಜೊತೆಗಿನ ಕಾಳಗದಲ್ಲಿ ದಸರಾ ಆನೆ ಕ್ಯಾಪ್ಟನ್‌ ಅರ್ಜುನ ಸಾವನ್ನಪ್ಪಿತ್ತು. ಅರ್ಜುನನ ಮೃತದೇಹವನ್ನು ಮೈಸೂರು ಅಥವಾ ಬೇರೆ ಪ್ರದೇಶಕ್ಕೆ ಕರೆತಂದು ಅಲ್ಲಿ ಸಮಾಧಿ ಮಾಡಬೇಕು. ಅದಕ್ಕೆ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಜನ ಆಗ್ರಹಿಸಿದ್ದರು. ಆದ್ರೆ, ಸ್ಥಳಾಂತರ ಸಾಧ್ಯವಿಲ್ಲ ಎಂದು ವಿರೋಧದ ನಡುವೆಯೇ ಆನೆ ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ಮಾಡಲಾಗಿದೆ.

ಇದೀಗ ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಅರ್ಜುನ ಎಲ್ಲಿ ಪ್ರಾಣ ಕಳೆದುಕೊಂಡಿದ್ದನೋ ಅಲ್ಲಿಯೇ ಸ್ಮಾರಕ ನಿರ್ಮಾಣ ಮಾಡುತ್ತೇವೆ. ಅದರ ಜೊತೆಗೆ ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕ ನಿರ್ಮಿಸಲು ಸೂಚನೆ ಕೊಟ್ಟಿದ್ದೇವೆ ಎಂದು ಹೇಳಿದರು.

ಅರ್ಜುನ ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ. ಅರ್ಜುನ ಇನ್ನೂ ಹೆಚ್ಚು ಕಾಲ ಬದುಕಬೇಕಿತ್ತು. ಆದ್ರೆ ಅಚಾನಕ್ಕಾಗಿ ಅರ್ಜುನನ ಸಾವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.

Share Post