BengaluruPolitics

ಗುತ್ತಿಗೆದಾರರು ಬೇರೆ ನಾಯಕರ ಭೇಟಿ ಮಾಡೋದನ್ನು ತಡೆಯಲಾಗದು; ಡಿ.ಕೆ.ಶಿವಕುಮಾರ್

ಬೆಂಗಳೂರು; ಗುತ್ತಿಗೆದಾರರು ಯಾರನ್ನು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ನಾವು ತಡೆಯಲಾಗದು. ಅವರಿಗೆ ಯಾರು ಸಲಹೆ, ಮಾರ್ಗದರ್ಶನ ಕೊಡಬೇಕೋ ಕೊಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಗುತ್ತಿಗೆದಾರರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನ್ಯಾಯ ಕೊಡಿಸಿ ಎಂದು ಕೇಳಿರುವ ಬಗ್ಗೆ ಗಮನ ಸೆಳೆದಾಗ, ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದರು. “ಅವರು ಎಲ್ಲೆಲ್ಲಿ ಹೋಗಬೇಕೋ ಹೊಗಲಿ. ಹೋಗುವವರನ್ನು ಯಾರು ತಡೆಯೋಕೆ ಆಗುವುದಿಲ್ಲ. ಅವರ ಹೋರಾಟಕ್ಕೆ ಜಯ ಸಿಗಲಿ. ನಾವು ಎಲ್ಲವನ್ನು ಗಮನಿಸುತ್ತಿದ್ದೇವೆ. ನಾವು ನ್ಯಾಯ, ನೀತಿಯಿಂದ ಸರ್ಕಾರ ನಡೆಸುತ್ತಿದ್ದೇವೆ, ಮುಂದೆಯೂ ನಡೆಸುತ್ತೇವೆ ಎಂದರು.

Share Post