BengaluruPolitics

ದೇವಸ್ಥಾನಗಳ ಜೀರ್ಣೋದ್ಧಾರ ಅನುದಾನಕ್ಕೆ ತಡೆ ವಿವಾದ; ಆದೇಶ ಹಿಂಪಡೆದ ಸರ್ಕಾರ

ಬೆಂಗಳೂರು; ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ನೀಡಲಾಗುವ ಅನುದಾನವನ್ನು ಸರ್ಕಾರ ತಡೆಹಿಡಿದಿತ್ತು. ಈ ವಿಚಾರ ಬಹಿರಂಗವಾಗಿ, ಸಾರ್ವಜನಿಕರಿಂದ ಆಕ್ರೋಶಗಳು ವ್ಯಕ್ತವಾಗುತ್ತಿದ್ದಂತೆ ಸರ್ಕಾರ ಡ್ಯಾಮೇಜ್‌ ಕಂಟ್ರೋಲ್‌ ಮಾಡಿಕೊಂಡಿದೆ. ಅನುದಾನ ತಡೆಹಿಡಿದ ಬಗ್ಗೆ ನೀಡಿದ್ದ ಆದೇಶವನ್ನು ಸರ್ಕಾರ ವಾಪಸ್‌ ಪಡೆದುಕೊಂಡಿದೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಯವರು, ಆದೇಶ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ನೀಡಲಾಗುವ ಅನುದಾನಕ್ಕೆ ತಡೆ ನೀಡಿದ್ದಕ್ಕೆ ಹಿಂದೂಪರ ಸಂಘಟನೆಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದವು. ಜೊತೆಗೆ ಬಿಜೆಪಿ ನಾಯಕರು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಈ ಬೆನ್ನಲ್ಲೆ ಸಮಜಾಯಿಷಿ ನೀಡಿರುವ ಸಚಿವ ರಾಮಲಿಂಗಾರೆಡ್ಡಿಯವರು, ಮುಜರಾಯಿ ಇಲಾಖೆ ಆಯುಕ್ತರು ಕನ್​ಫ್ಯೂಸ್​ ಆಗಿದ್ದಾರೆ. ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂಬ ಯಾವ ಅನುಮಾನವೂ ಇಲ್ಲ. ಯಾವ ದೇವಸ್ಥಾನದ ಕೆಲಸವನ್ನೂ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

 

Share Post