Bengaluru

ಅನಗತ್ಯವಾಗಿ ಟೆಸ್ಟಿಂಗ್‌ ಪ್ರಮಾಣ ಹೆಚ್ಚಳವಿಲ್ಲ; ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು; ರಾಜ್ಯಕ್ಕೆ ಕೊರೊನಾ ನಾಲ್ಕನೇ ಅಲೆ ಎಂಟ್ರಿ ಆದರೂ ಅದನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಸಿಎಂ ಸಭೆಗೂ ಮುನ್ನ ಮಾತನಾಡಿದ ಅವರು, ತಾಂತ್ರಿಕ ಸಲಹಾ ಸಮಿತಿಯವರು ಸಭೆಯಲ್ಲಿ ಕೆಲ ಸಲಹೆಗಳನ್ನು ನೀಡಲಿದ್ದಾರೆ. ಅವರ ಸಲಹೆಯಂತೆ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಹಾಗೂ ನೆರೆ ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ. ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಕೂಲಂಕಷವಾಗಿ ಚರ್ಚೆ ನಡೆಯುತ್ತದೆ ಎಂದು ಸುಧಾಕರ್‌ ಹೇಳಿದರು. ಅನಗತ್ಯವಾಗಿ ಟೆಸ್ಟಿಂಗ್‌ ಪ್ರಮಾಣ ಹೆಚ್ಚಳ ಮಾಡುವುದಿಲ್ಲ. ಬದಲಾಗಿ, ಮುಂಜಾಗ್ರತೆ ವಹಿಸಿ, ಕೊರೊನಾ ನಿಯಂತ್ರಿಸುವುದು ಹೇಗೆ ಎಂಬುದರ ಬಗ್ಗೆ ಚರ್ಚೆ ನಡೆಲಾಗುತ್ತದೆ.

Share Post