BengaluruCrime

ಒತ್ತುವರಿ ತೆರವಿಗೆ ವಿರೋಧ; ಆತ್ಮಹತ್ಯೆಗೆ ಯತ್ನಿಸಿದ ದಂಪತಿ

ಬೆಂಗಳೂರು; ಬೆಂಗಳೂರಿನಲ್ಲಿ ಸೋಮವಾರದಿಂದ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ವೇಳೆ ದಂಪತಿ ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಬೆದರಿಕೆ ಹಾಕಿರುವ ಘಟನೆ ಕೆ.ಆರ್‌.ಪುರಂನ ಗಾಯತ್ರಿ ಲೇಔಟ್‌ನಲ್ಲಿ ನಡೆದಿದೆ. 

ಆತ್ಮಹತ್ಯೆಗೆ ಯತ್ನಿಸಿರುವ ಸೋನಾ ಹಾಗೂ ಸುನಿಲ್‌ ಸಿಂಗ್‌ ದಂಪತಿ ಮೂರು ಅಂತಸ್ತಿನ ಕಟ್ಟಡ ಕಟ್ಟಿದ್ದಾರೆ. ಅದರಲ್ಲಿ ಎರಡು ಮೀಟರ್‌ನಷ್ಟು ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆಂದು ಅಧಿಕಾರಿಗಳು ಗುರುತಿಸಿದ್ದಾರೆ. ಗುರುತಿಸಿರುವ ಮಾರ್ಕ್‌ನಂತೆ ಕಟ್ಟಡ ತೆರವು ಮಾಡಿದರೆ ಪಿಲ್ಲರ್‌ ಕೂಡಾ ಉರುಳಿಸಬೇಕಾಗುತ್ತದೆ. ಆಗ ಇಡೀ ಕಟ್ಟಡವೇ ನೆಲಸಮವಾಗುವ ಭೀತಿ ಇದೆ. ಈ ಹಿನ್ನೆಲೆಯಲ್ಲಿ ಇಡೀ ಕಟ್ಟಡ ಕಳೆದುಕೊಳ್ಳುವ ಭೀತಿಯಿಂದ ದಂಪತಿ ಆತ್ಮಹತ್ಯೆಗೆ ಯತ್ನ ಮಾಡಿದೆ.

15 ವರ್ಷಗಳ ಹಿಂದೆ 40 ಲಕ್ಷ ರೂಪಾಯಿ ಸಾಲ ಮಾಡಿ ಮನೆ ಕಟ್ಟಿಕೊಂಡಿದ್ದೇವೆ. ಜೊತೆಗೆ ಲಾಕ್‌ಡೌನ್‌ ವೇಳೆ ಕೆಲಸ ಕಳೆದುಕೊಂಡು ಜೀವನ ಸಾಗಿಸುವುದೇ ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಮನೆಯನ್ನೂ ಉರುಳಿಸಿದರೆ ಬದುಕುವುದು ಹೇಗೆ ಅಂತ ದಂಪತಿ ಪ್ರಶ್ನಿಸಿದ್ದಾರೆ. ಯಾವುದೇ ಕಾರಣಕ್ಕೂ ಮನೆ ಕೆಡವಲು ಬಿಡುವುದಿಲ್ಲ ಎಂದು ಕ್ಯಾನ್‌ ನಲ್ಲಿ ತಂದಿದ್ದ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಅಲ್ಲಿದ್ದವರು ದಂಪತಿಯನ್ನು ರಕ್ಷಣೆ ಮಾಡಿದ್ದಾರೆ.

Share Post