BengaluruPolitics

ಅಡ್ಡ ಮತದಾನ ಮಾಡಿದ ಶಾಸಕರ ಉಚ್ಛಾಟನೆಗೆ ಜೆಡಿಎಸ್‌ ತೀರ್ಮಾನ

ಬೆಂಗಳೂರು; ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ಜೆಡಿಎಸ್‌ ತೀರ್ಮಾನ ಮಾಡಿದೆ. ಜೆಡಿಎಸ್‌ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಕೋಲಾರ ಕ್ಷೇತ್ರ ಶಾಸಕ ಶ್ರೀನಿವಾಸಗೌಡ ಹಾಗೂ ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಅಡ್ಡ ಮತದಾನ ಮಾಡಿದ್ದಾರೆ. ಮಾನ ಮರ್ಯಾದೆ ಇದ್ದರೆ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

   ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರ ಮನೆ ಮುಂದೆಯೂ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರ ಸದಸ್ಯತ್ವ ರದ್ದು ಮಾಡಬೇಕೆಂದು ಸ್ಪೀಕರ್‌ಗೆ ಮನವಿ ಮಾಡುತ್ತೇವೆ. ಕೋರ್ಟ್‌ಗೂ ಅರ್ಜಿ ಸಲ್ಲಿಸುತ್ತೇವೆ ಎಂದು ಸಿ.ಎಂ.ಇಬ್ರಾಹಿಂ ಹೇಳಿದರು.

ಕಾಂಗ್ರೆಸ್ ವಿರುದ್ಧ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ಮಾಡುತ್ತೇವೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿ ಬಿ ಟೀಂ ಅನ್ನೋದು ಗೊತ್ತಾಗಿದೆ. ಕಾಂಗ್ರೆಸ್​​ನವರು ಡೀಲ್ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಾಂಗ್ರೆಸ್ ಇದರಲ್ಲಿ ಭಾಗಿಯಾಗಿದೆ.

Share Post