Bengaluru

ಬೆಂಗಳೂರಿನ ಹೆಬ್ಬಾಳದ ಮಸೀದಿಯಲ್ಲಿ ಸಿಲಿಂಡರ್‌ ಸ್ಪೋಟ

ಬೆಂಗಳೂರು : ಬೆಂಗಳೂರಿನ ಹೆಬ್ಬಾಳದಲ್ಲಿರುವ ಮಸೀದಿಯಲ್ಲಿ ಸಿಲಿಂಡರ್‌ ಸ್ಪೋಟವಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ. ಮಸೀದಿಯಲ್ಲಿ ಅನಿಲ ಸೋರಿಕೆಯಾಗಿ ಈ ಅವಘಡ ನಡೆದಿದೆ ಎಂದು ಹೇಳಲಾಗ್ತಿದೆ.

ನಾಗವಾರ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿರುವ ಮಸೀದಿಯಲ್ಲಿ ಈ ಘಟನೆ ನಡೆದಿದೆ. ಮಸೀದಿ ಆವರಣದಲ್ಲಿ ಗ್ಯಾಸ್‌ ಸ್ಟೌವ್‌ ರಿಪೇರ್‌ ಅಂಗಡಿ ಇತ್ತು. ಅಂಗಡಿಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ನಿಂದ ಈ ಘಟನೆ ಸಂಭವಿಸಿದೆ. ಅಕ್ರಮ ಗ್ಯಾಸ್‌ ಫಿಲ್ಲಿಂಗ್‌ ಮಾಡುತ್ತಿದ್ದದ್ದೇ ಈ ಸ್ಪೋಟಕ್ಕೆ ಕಾರಣ ಎಂದು ಹೇಳಲಾಗ್ತಿದೆ.

ಮಸೀದಿಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಎಲ್ಲರೂ ಹೊರಗೆ ಬಂದಿದ್ದಾರೆ. ನಂತರ ಸಿಲಿಂಡರ್‌ ಸ್ಪೋಟ್‌ ಸಂಭವಿಸಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ.

Share Post