BengaluruPolitics

ವಿಶ್ವನಾಥ್‌ ಮುಂದಾಲೋಚನೆಯ ರಾಜಕಾರಣಿ: ಡಿ.ಕೆ.ಶಿವಕುಮಾರ್‌

ಬೆಂಗಳೂರು; ನಾನು ಯುವ ಕಾಂಗ್ರೆಸ್‌ನಲ್ಲಿ ಇದ್ದಾಗಿನಿಂದಲೂ ಎಚ್‌.ವಿಶ್ವನಾಥ್‌ ಅವರ ಜೊತೆ ಪಕ್ಷ ಕಟ್ಟುವ ಕೆಲಸ ಮಾಡಿದ್ದೇವೆ. ಅವರೊಬ್ಬರು ಮುಂದಾಲೋಚನೆ ಇರುವ ರಾಜಕಾರಣಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇಂದು ಹೆಚ್‌.ವಿಶ್ವನಾಥ್‌ ಅವರು ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಅನಂತರ ಡಿ.ಕೆ.ಶಿವಕುಮಾರ್‌ ಮಾತನಾಡಿದರು.

ಇನ್ನು ವಿಧಾನಸಭಾ ಚುನಾವಣೆ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಹೊಸಮುಖಗಳಿಗೆ ಅವಕಾಶ ಕೊಡಬೇಕು ಎಂಬುದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಯಕೆ. ಇದೂ ಕೂಡಾ ಒಂದು ರಾಜಕೀಯ ತಂತ್ರಗಾರಿಕೆ. ಒಂದೇ ದಿನದಲ್ಲಿ ಏನನ್ನೂ ಹೇಳೋದಕ್ಕೆ ಆಗೋದಿಲ್ಲ ಎಂದು ಹೇಳಿದ್ದಾರೆ.

Share Post