BengaluruPolitics

ಬಿಜೆಪಿ ನಾಯಕರ ಅಹಂಕಾರಕ್ಕೆ ಸೋಲಾಗಿದೆ; ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು; ಬಿಜೆಪಿ ನಾಯಕರ ಅಹಂಕಾರಕ್ಕೆ ಸೋಲಾಗಿದೆ. ಸಂವಿಧಾನದ ರಕ್ಷಣೆಗೆ ಜನ ಮತ ಹಾಕಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸ್ವಾಭಿಮಾನ ಹಾಗೂ ಬ್ರಾಂಡ್‌ ಕರ್ನಾಟಕಕ್ಕೆ ಸಂದ ಜಯ ಎಂದಿರುವ ಮಲ್ಲಿಕಾರ್ಜುನ ಖರ್ಗೆ, ಮೇಕೆದಾಟು ಹೋರಾಟದಿಂದ ನಮ್ಮ ಪಕ್ಷದ ಕಾರ್ಯಕರ್ತರಿಗೆ ಉತ್ಸಾಹ ಬಂತು. ನಂತರ ಭಾರತ್‌ ಜೋಡೋ ಯಾತ್ರೆಯಿಂದ ಪಕ್ಷಕ್ಕೆ ಶಕ್ತಿ ಬಂತು ಎಂದು ಹೇಳಿದರು. ರಾಜ್ಯದಲ್ಲಿ ಭಾರತ್‌ ಜೋಡೋ ಯಾತ್ರೆ ನಡೆದ ಪ್ರದೇಶದಲ್ಲಿ ಶೇ.99ರಷ್ಟು ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದೆ ಎಂದು ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆಯ ದೊಡ್ಡ ಸಾಧನೆ ಇದು. ಇದು ಸಾಮೂಹಿಕ ನಾಯಕತ್ವಕ್ಕೆ ಸಿಕ್ಕ ದೊಡ್ಡ ಜನವಾಗಿದ್ದು, ಮೊದಲ ಕ್ಯಾಬಿನೆಟ್‌ನಲ್ಲೇ ಕೊಟ್ಟ ಐದು ಭರವಸೆಗಳನ್ನು ಈಡೇರಿಸಬೇಕು ಎಂದು ಹೇಳಿದರು.

Share Post