Bengaluru

ಆಸ್ಪತ್ರೆಯಿಂದ ದೇವೇಗೌಡ ಡಿಸ್ಚಾರ್ಜ್‌; ವೈದ್ಯರಿಗೆ ಪುಸ್ತಕ ಉಡುಗೊರೆ

ಬೆಂಗಳೂರು: ಕೊರೊನಾ ಬಂದಿದ್ದರಿಂದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ದೇವೇಗೌಡರು ಈಗ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಯಿತು. ಈ ವೇಳೆ ಗೌಡರು, ವೈದ್ಯರಿಗೆ ತಮ್ಮ ಜೀವ ಚರಿತ್ರೆ ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು. 

ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್‌ ಕಾಣಿಸಿಕೊಂಡಿತ್ತು. ಆದ್ರೆ ಗೌಡರ ಆರೋಗ್ಯದಲ್ಲಿ ಯಾವುದೇ ಲಕ್ಷಣಗಳು ಕಾಣಿಸಿರಲಿಲ್ಲ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಅಡ್ಮಿಟ್‌ ಮಾಡಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಮತ್ತೆ ಪರೀಕ್ಷೆ ನಡೆಸಲಾಗಿದ್ದು, ನೆಗೆಟಿವ್‌ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಡಿಸ್ಚಾರ್ಜ್‌ ಮಾಡಲಾಯಿತು.

ಈ ಬಗ್ಗೆ ದೇವೇಗೌಡರು ಟ್ವೀಟ್‌ ಮಾಡಿದ್ದು, ಅನಾರೋಗ್ಯದ ಕಾರಣ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ನನಗೆ ಡಾ. ಸತ್ಯನಾರಾಯಣ ಮೈಸೂರು ಅವರು ಚಿಕಿತ್ಸೆ ನೀಡಿ ಆರೈಕೆ ಮಾಡಿದರು. ಈ ಹಿನ್ನಲೆಯಲ್ಲಿ ನನ್ನ ಜೀವನಚರಿತ್ರೆ Furrows In Field ಪುಸ್ತಕವನ್ನು ಅವರಿಗೆ ಕೃತಜ್ಞತಾ ಸಂಕೇತವಾಗಿ ನೀಡಿ ಅಭಿನಂದಿಸಿದೆ ಎಂದು ಹೇಳಿದ್ದಾರೆ.

Share Post