BengaluruCrime

ಡಿಎಚ್‌ಒ ಕಿರುಕುಳ ಆರೋಪ; ವೈದ್ಯ ನೇಣಿಗೆ ಶರಣು!

ಬೆಂಗಳೂರು; ಜಿಲ್ಲಾ ಆರೋಗ್ಯಾಧಿಕಾರಿಯ ಕಿರುಕುಳಕ್ಕೆ ಬೇಸತ್ತು ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್‌ನಲ್ಲಿ ವಾಸವಿದ್ದ ನಟರಾಜ್‌ ಎಂಬುವವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ನಟರಾಜ್‌ ಅವರು ಮಂಡ್ಯ ಜಿಲ್ಲೆಯ ಆರೋಗ್ಯ ಇಲಾಖೆ ಕಚೇರಿಯಲ್ಲಿ ವೆಲ್‌ಫೇರ್‌ ಆಫಿಸರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರಿಗೆ ಇತ್ತೀಚೆಗೆ ಹೃದಯಘಾತವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ರಜೆಯಲ್ಲಿದ್ದರು. ಇಂದು ಅವರು ಕರ್ತವ್ಯಕ್ಕೆ ಹಾಜರಾಗಿದ್ದು, ಕೆಲಸಕ್ಕೆ ರಿಪೋರ್ಟ್‌ ಮಾಡಿಕೊಳ್ಳಲು ಮಂಡ್ಯಕ್ಕೆ ಹೋಗಿದ್ದರು. ಈ ವೇಳೆ ಮಂಡ್ಯ ಡಿಎಚ್‌ಒ ಇವರಿಗೆ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸತ್ತ ಅವರು, ಮನೆಗೆ ವಾಪಸ್ಸಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

 

Share Post