Bengaluru

ಎಂಜಿ ರಸ್ತೆಯಲ್ಲಿ ದಿವ್ಯಾ ಸುರೇಶ್‌ ರಂಪಾಟ

ಬೆಂಗಳೂರು: ನೈಟ್‌ ಕರ್ಫ್ಯೂ ಜಾರಿಯಾದ ಮೊದಲೇ ದಿನವೇ ಬೆಂಗಳೂರಿನಲ್ಲಿ ಹಲವು ಕಡೆ ರಂಪಾಟಗಳು ನಡೆದಿವೆ. ಹತ್ತು ಗಂಟೆಯ ನಂತರ ಓಡಾಡಬೇಡಿ ಎಂದು ಪೊಲೀಸರು ಎಚ್ಚರಿಕೆ ಕೊಟ್ಟರೂ ಕೆಲವರು ಹತ್ತು ಗಂಟೆಯ ನಂತರವೂ ಓಡಾಡುತ್ತಿದ್ದರು. ಈ ವೇಳೆ ಪೊಲೀಸರು, ಮನೆಗೆ ಹೋಗಿ ಎಂದಿದ್ದಕ್ಕೆ ಪೊಲೀಸರ ಜೊತೆಯೇ ರಂಪಾಟ ಮಾಡಿಕೊಂಡಿದ್ದಾರೆ.

ಅದರಲ್ಲೂ ಬಿಗ್‌ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಕೂಡಾ ಪೊಲೀಸರೊಂದಿಗೆ ಕಿರಿಕಿರಿ ಮಾಡಿಕೊಂಡಿದ್ದಾರೆ. ದಿವ್ಯಾ ಸುರೇಶ್‌ ಅವರು, ರಾತ್ರಿ ಗಂಟೆಯ ನಂತರವೂ ಎಂಜಿ ರಸ್ತೆಯಲ್ಲಿ ಓಡಾಡುತ್ತಿದ್ದರು. ಈ ವೇಳೆ ಅವರು ಮದ್ಯ ಸೇವಿಸಿದ್ದರು ಎಂದು ಹೇಳಲಾಗುತ್ತಿದೆ. ಮನೆಗೆ ಹೋಗಿ ನೈಟ್‌ ಕರ್ಫ್ಯೂ ಜಾರಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ವೇಳೆ ದಿವ್ಯಾ ಸುರೇಶ್‌ ಪೊಲೀಸರ ಜೊತೆ ವಾಗ್ವಾದ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಎರಡನೇ ದಿನವಾದ ಇಂದು ನೈಟ್‌ ಕರ್ಫ್ಯೂವನ್ನು ಇನ್ನಷ್ಟು ಬಿಗಿಗೊಳಿಸಲು ತೀರ್ಮಾನಿಸಲಾಗಿದೆ. ಇಂದು ರಾತ್ರಿ ೧೦ ನಂತರ ಫ್ಲೈಓವರ್‌ಗಳನ್ನು ಕೂಡಾ ಬಂದ್‌ ಮಾಡಲು ತೀರ್ಮಾನಿಸಲಾಗಿದೆ.

 

ದಿವ್ಯಾ ಸುರೇಶ್‌

Share Post