BengaluruPolitics

ಯಾವ ಬೆದರಿಕೆಗೂ ನಾವು ಜಗ್ಗುವುದಿಲ್ಲ; ಡಿಕೆಶಿ, ಸಿದ್ದರಾಮಯ್ಯ

ಬೆಂಗಳೂರು; ಪ್ರತಿಭಟನೆ ಹಮ್ಮಿಕೊಂಡಿರುವ ಕಾಂಗ್ರೆಸ್‌ ವಿರುದ್ಧ  ದೂರು ದಾಖಲಿಸುತ್ತೇವೆ ಎಂದು ಹೇಳಿರುವ ಸಚಿವ ಡಾ.ಕೆ.ಸುಧಾಕರ್‌ ವಿರುದ್ಧ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಕಚೇರಿ ಬಳಿ ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ನಾವು ಯಾವ ಬೆದರಿಕೆಗೂ ಜಗ್ಗೋದಿಲ್ಲ ಎಂದು ಹೇಳಿದ್ದಾರೆ.

ಮೂಲಭೂತ ಹಕ್ಕು ದಮನವಾದರೂ ಪ್ರತಿಭಟನೆ ಮಾಡಬಾರದಾ..? ಎಂದು ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ, ಚಡ್ಡಿ ಹೊತ್ಕೊಂಡು ನಮ್ಮ ಮನೆ ಮುಂದೆ ಪ್ರತಿಭಟನೆ ಮಾಡಿದರು. ಅವರ ವಿರುದ್ಧ ಯಾಕೆ ಕೇಸ್‌ ದಾಖಲಿಸಲಿಲ್ಲ. ಆಗ ಕೋರ್ಟ್‌ ಆದೇಶ ಉಲ್ಲಂಘನೆಯಾಗಲಿಲ್ಲವೇ..? ಎಂದು ಪ್ರಶ್ನಿಸಿದ್ದಾರೆ. ಇತ್ತ ಡಿ.ಕೆ.ಶಿವಕುಮಾರ್‌, ಬಿ.ಕೆ.ಹರಿಪ್ರಸಾದ್‌ ಕೂಡಾ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

 

Share Post