Bengaluru

ಜನ್ಮದಿನ ಆಚರಿಸದಂತೆ ಬೆಂಬಲಿಗರಿಗೆ ಡಿಕೆಶಿ ಕರೆ

ಬೆಂಗಳೂರು: ತಮ್ಮ ಜನ್ಮದಿನವನ್ನು ಯಾರೂ ಆಚರಣೆ ಮಾಡದಂತೆ ಡಿ.ಕೆ. ಶಿವಕುಮಾರ್ ತಮ್ಮ ಬೆಂಬಲಿಗರು ಹಾಗೂ ಹಿತೈಷಿಗಳಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು,  ನನ್ನ ಜನ್ಮದಿನ ಮೇ15 ಆಗಿದ್ದು, ನಾನು ಈ ತಿಂಗಳು 12 ರಿಂದ 18 ರವರೆಗೆ ತಾವು ಊರಿನಲ್ಲಿ ಇರುವುದಿಲ್ಲ. ರಾಜಸ್ಥಾನದ ಉದಯಪುರದಲ್ಲಿ ನಡೆಯುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಪಾಲ್ಗೊಳ್ಳಲು ತೆರಳಲಿದ್ದೇನೆ. ಹೀಗಾಗಿ ಯಾರೂ ಮೇ 15ರಂದು ಶುಭಾಶಯ ಹೇಳಲು, ಅಭಿನಂದಿಸಲು ಮನೆ ಬಳಿ ಬರಬಾರದು ಎಂದು ಮನವಿ ಮಾಡುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

 

ನನ್ನ ಜನ್ಮದಿನದ ನಿಮಿತ್ತ ಯಾರೂ ಮಾಧ್ಯಮಗಳಲ್ಲಿ ಶುಭಾಶಯಗಳ ಜಾಹೀರಾತು ನೀಡಬಾರದು. ಒಂದೊಮ್ಮೆ ಕೊಡಲೇಬೇಕು ಎಂದೆನಿಸಿದರೆ ಮುಂದೆ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಳ್ಳುವ ಹೋರಾಟ, ಪ್ರತಿಭಟನೆಗಳ ಬಗ್ಗೆ ಜಾಹೀರಾತು ನೀಡಬೇಕೆಂದು ವಿನಂತಿಸುತ್ತೇನೆ. ಅದನ್ನೇ ನೀವು ನನಗೆ ಸಲ್ಲಿಸುವ ಜನ್ಮದಿನದ ಶುಭಾಶಯ ಎಂದು ಪರಿಗಣಿಸುತ್ತೇನೆ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share Post