BengaluruPolitics

ಡಿ.ಕೆ.ಶಿವಕುಮಾರ್‌ ಸಿಟಿ ರೌಂಡ್ಸ್;‌ ವಾಹನ ದಟ್ಟಣೆ ಹೆಚ್ಚಿಸುವ ಸ್ಥಳಗಳ ಪರಿಶೀಲನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ನಗರ ಸಂಚಾರ ನಡೆಸಿದರು. ಮೊದಲಿಗೆ ಬಿಡಿಎ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಅನಂತರ ಟ್ರಾಫಿಕ್‌ ಸಮಸ್ಯೆ ಇರುವ ಸ್ಥಳಗಳಿಗೆ ಭೇಟಿ ನೀಡಿ, ಸಮಸ್ಯೆ ಬಗೆಹರಿಸುವ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸಿದರು. ಮೊದಲಿಗೆ ಅವರು ಹೆಬ್ಬಾಳ ಮೇಲ್ಸೇತುವೆ ಬಳಿ ಪರಿಶೀಲನೆ ನಡೆಸಿದರು. ಇಲ್ಲಿ ನಿತ್ಯ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಇದೇ ವೇಳೆ ತಮ್ಮನ್ನು ಭೇಟಿಯಾದ ಪೌರಕಾರ್ಮಿಕರ ಜೊತೆ ಕೂಡಾ ಡಿ.ಕೆ.ಶಿವಕುಮಾರ್‌ ಮಾತನಾಡಿದರು. ಅವರ ಸಮಸ್ಯೆಗಳನ್ನು ಆಲಿಸಿದರು. ಶೀಘ್ರವೇ ಸಮಸ್ಯೆ ಬಗೆಹರಿಸುತ್ತೇವೆಂದು ಆಶ್ವಾಸನೆ ನೀಡಿದರು. ಅನಂತರ ಎಚ್ಆರ್ ಬಿಆರ್ ನ ಟೆಲಿಕಾಂ ಬಡಾವಣೆ ಬಳಿ ರಾಜಕಾಲುವೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು.

Share Post