Bengaluru

ಚಂದ್ರಯಾನ ಯಶಸ್ವಿಯಾಗಲೆಂದು ಶುಭ ಕೋರಿದ ಡಿ.ಕೆ.ಶಿವಕುಮಾರ್

ಬೆಂಗಳೂರು; ಚಂದ್ರಯಾನ-3 ಯಶಸ್ವಿಯಾಗಲೆಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಭ ಹಾರೈಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು ನಮ್ಮ ದೇಶಕ್ಕೆ ಇದು ಹೆಮ್ಮೆಯ ವಿಚಾರ. ಇಂದು ಸಂತಸದ ದಿನ ಎಂದು ಹೇಳಿದ್ದಾರೆ.

ಸಾಫ್ಟ್‌ ಲ್ಯಾಂಡಿಂಗ್‌ನ್ನು ನಾನು ಕೂಡಾ ಸಮಯ ಮಾಡಿಕೊಂಡು ವೀಕ್ಷಣೆ ಮಾಡುತ್ತೇನೆ. ಸರ್ಕಾರದ ಪರವಾಗಿ ಈ ಯೋಜನೆಯಲ್ಲಿ ಶ್ರಮಪಟ್ಟು ದುಡಿದವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ನಮ್ಮ ವಿಜ್ಞಾನಿಗಳ ಸಾಧನೆಯನ್ನು ಶ್ಲಾಘಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

 

Share Post