BengaluruPolitics

ಸತೀಶ್‌ ಜಾರಕಿಹೊಳಿ ಭೇಟಿಯಾದ ಡಿ.ಕೆ.ಶಿವಕುಮಾರ್‌; ಮುಸುಕಿನ ಗುದ್ದಾಟಕ್ಕೆ ಬ್ರೇಕ್‌ ಬಿತ್ತಾ..?

ಬೆಂಗಳೂರು; ಬೆಳಗಾವಿ ರಾಜಕಾರಣದಲ್ಲಿ ಮೂಗು ತೂರಿಸಲಾಗುತ್ತಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅಸಮಾಧಾನಗೊಂಡಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಳಗಾವಿಗೆ ಹೋದಾಗ ಯಾರೊಬ್ಬರೂ ಅವರನ್ನು ಆಹ್ವಾನಿಸೋದಕ್ಕೆ ಬಂದಿರಲಿಲ್ಲ. ಹೀಗಿರುವಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಈ ಶೀತಲ ಸಮರಕ್ಕೆ ವಿರಾಮ ಘೋಷಣೆ ಮಾಡಿದಂತೆ ಕಾಣುತ್ತಿದೆ. ಯಾಕಂದ್ರೆ ಇಂದು ಸ್ವತಃ ಡಿ.ಕೆ.ಶಿವಕುಮಾರ್‌ ಅವರು ಸತೀಶ್‌ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. 

ನಗರದ ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್‌, ಕೆಲ ಸಮಯ ಮಾತುಕತೆ ನಡೆಸಿದರು. ಆದ್ರೆ ಏನು ಮಾತನಾಡಿದರು ಎಂಬುದರ ಬಗ್ಗೆ ಗೊತ್ತಾಗಿಲ್ಲ. ಮಾತುಕತೆಯ ನಂಥರ ಶಿವಕುಮಾರ್ ಅವರು ತೆರಳುವಾಗ ವಿದಾಯ ಹೇಳಲು ಸತೀಶ್ ಕಾರಿನವರೆಗೆ ಬಂದು ಕೈ ಕುಲುಕಿದರು.

ಮತ್ತೊಂದೆಡೆ ಮಾತನಾಡಿರುವ ಸತೀಶ್‌ ಜಾರಕಿಹೊಳಿ, ನನ್ನ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಿದ್ದಾರೆ.

Share Post