BengaluruPolitics

ವಿಚಾರಣೆಗೆ ರಾಹುಲ್‌ ಹಾಜರಾಗ್ತಾರೆ; ಅಂದು ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ನ್ಯಾಷನಲ್‌ ಹೆರಾಲ್ಡ್‌ ಕೇಸ್‌ಗೆ ಸಂಬಂಧಿಸಿದಂತೆ ನಮ್ಮ ನಾಯಕ ರಾಹುಲ್‌ ಗಾಂಧಿ ಜೂನ್‌ 13 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಯಾವುದಕ್ಕೂ ಹೆದರುವುದಿಲ್ಲ. ಜೈಲಿಗೆ ಹೋಗುವುದಕ್ಕೂ ಸಿದ್ಧ ಎಂದು ಅವರು ಹೇಳಿದ್ದಾರೆ.

ಜೂನ್‌ 13 ರಂದು ರಾಹುಲ್‌ ಗಾಂಧಿಯವರು ವಿಚಾರಣೆಗೆ ಹಾಜರಾಗುತ್ತಾರೆ. ರಾಜಕೀಯ ದ್ವೇಷಕ್ಕಾಗಿ ಇಡಿ ಮೂಲಕ ಸಮನ್ಸ್‌ ನೀಡಲಾಗಿದೆ. ಹೀಗಾಗಿ ಕಾಂಗ್ರೆಸ್‌ ಪಕ್ಷ ಜೂನ್‌ 13 ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್‌ ಕಾರ್ಯಕರ್ತರು, ಎಲ್ಲಾ ರಾಜ್ಯಗಳ ಜಾರಿ೯ ನಿರ್ದೇಶನಾಲಯದ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Share Post