Bengaluru

ಸಂತೋಷ್‌ ಆತ್ಮಹತ್ಯೆ ಪ್ರಕರಣ; ಸಿಎಂ ತನಿಖೆಯ ಹಾದಿ ತಪ್ಪಿಸ್ತಿದ್ದಾರೆ – ಡಿ.ಕೆ.ಶಿವಕುಮಾರ್‌

ಬೆಂಗಳೂರು: ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ರಕ್ಷಣೆ ಮಾಡುತ್ತಿದ್ದಾರೆ. ನಾನು ಸಿಎಂ ಬೊಮ್ಮಾಯಿಯವರನ್ನು ಏನೋ ಅಂದುಕೊಂಡಿದ್ದೆ. ಆದ್ರೆ, ಅವರು ಕೂಡಾ ತಪ್ಪಿತಸ್ಥರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರು, ನೇರವಾಗಿ ಈಶ್ವರಪ್ಪ ತಪ್ಪು ಮಾಡಿಲ್ಲ ಅಂತಿದ್ದಾರೆ ಎಂದು ಆರೋಪಿಸಿದರು.

 

Share Post