BengaluruPolitics

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಡಿ.ಕೆ.ಶಿವಕುಮಾರ್‌ ಕುಟುಂಬ

ಮಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಂಜುನಾಥನ ವಿಶೇಷ ದರ್ಶನ ಪಡೆದಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್‌ ಜೊತೆ ಅವರ ಪತ್ನಿ ಉಷಾ, ಮಗ, ಮಗಳು ಹಾಗೂ ಅಳಿಯ ಕೂಡಾ ಇದ್ದರು.

ಇದಕ್ಕೂ ಮೊದಲು ಚುನಾವಣಾಧಿಕಾರಿಗಳು ಡಿ.ಕೆ.ಶಿವಕುಮಾರ್‌ ಕುಟುಂಬ ಪ್ರಯಾಣಿಸುವ ಹೆಲಿಕಾಪ್ಟರ್‌ ತಪಾಸಣೆ ಮಾಡಿದ್ದಾರೆ. ಈ ವೇಳೆ ಹೆಲಿಕಾಪ್ಟರ್‌ ಪೈಲಟ್‌ ಹಾಗೂ ಚುನಾವಣಾಧಿಕಾರಿಗಳು ನಡುವೆ ಮಾತಿನ ಚಕಮಕಿ ನಡೆದಿದೆ. ಪೈಲಟ್‌ ಇದು ಖಾಸಗಿ ಹೆಲಿಕಾಪ್ಟರ್‌ ಆಗಿದ್ದು, ಪರಿಶೀಲನೆ ಮಾಡಲು ಅವಕಾಶವಿಲ್ಲ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಕೆಲಕಾಲ ವಾಗ್ವಾದ ನಡೆದಿದೆ. ನಂತರ ಹೆಲಿಕಾಪ್ಟರ್‌ ಪರಿಶೀಲನೆ ಮಾಡಲಾಗಿದೆ.

Share Post