BengaluruPolitics

ರಾಮನಗರದಿಂದ ಡಿ.ಕೆ.ಸುರೇಶ್‌ ಸ್ಪರ್ಧೆಗೆ ಸಂದೇಶ ಬಂದಿದೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ರಾಮನಗರ ವಿಧಾನಸಭಾ ಕ್ಷೇತ್ರದಿಂದ ಡಿ.ಕೆ.ಸುರೇಶ್‌ ಅವರನ್ನು ಸ್ಪರ್ಧೆಗಿಳಿಸಬೇಕೆಂಬ ಸಂದೇಶ ಹೈಕಮಾಂಡ್‌ನಿಂದ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮನಗರದಿಂದ ಡಿ.ಕೆ.ಸುರೇಶ್‌ ಸ್ಪರ್ಧೆ ತಳ್ಳಿಹಾಕೋಕೆ ಆಗಲ್ಲ. ಈ ಬಗ್ಗೆ ಪ್ರಪೋಸಲ್‌ ಇದೆ ಎಂದು ಹೇಳಿದರು.

ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿಯವರು, ಡಿ.ಕೆ.ಸುರೇಶ್‌ ಅವರನ್ನು ರಾಮನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿ ಎಂದು ಹೈಕಮಾಂಡ್‌ ಹೇಳುತ್ತಿದೆ. ಆದ್ರೆ, ನಾವು ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ. ರಾಮನಗರದ ಕಾಂಗ್ರೆಸ್‌ ಕಾರ್ಯಕರ್ತರು ಕೂಡಾ ಡಿ.ಕೆ.ಸುರೇಶ್‌ ಅವರನ್ನು ನಿಲ್ಲಿಸುವಂತೆ ಕೇಳುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಈ ಬಗ್ಗೆ ನಿರ್ಧಾರ ಮಾಡುತ್ತೇವೆ. ಡಿ.ಕೆ.ಸುರೇಶ್‌ ಅವರು ಇಲ್ಲಿ ಸ್ಪರ್ಧೆ ಮಾಡಿದರೆ, ಸಂಸತ್‌ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಹೀಗಾಗಿ ಸುಮ್ಮನೆ ಬೈ ಎಲೆಕ್ಷನ್ ಗೆ ಹೋಗೋಕೆ ನಮಗೆ ಇಷ್ಟವಿಲ್ಲ. ಹೀಗಾಗಿ ಯೋಚನೆ ಮಾಡುತ್ತಿದ್ದೇನೆ. ಆದ್ರೆ ರಾಮನಗರದಿಂದ ಡಿ.ಕೆ.ಸುರೇಶ್‌ ಸ್ಪರ್ಧೆ ತಳ್ಳಿಹಾಕೋಕೆ ಆಗಲ್ಲ ಎಂದು ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

Share Post